NewsNews In Kannada

ನುಸುಳುಕೊರರು ಭಾರತಕ್ಕೆ ನುಗ್ಗುವದನ್ನ ಕಡಿವಾಣ ಹಾಕಿದ್ದೆ ಬಿಜೆಪಿ ಸರ್ಕಾರ- ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಜಿ.ಪರಮೇಶ್ವರ್ ಹೇಳಿಕೆಗೆ ಬೇಜವಬ್ದಾರಿಯಿಂದ ಹೇಳಿಕೆಯಾಗಿದೆ.‌ ಒಬ್ಬ ಗೃಹ ಸಚಿವರಾಗಿದ್ದವರು ಈ ರೀತಿ ಹೇಳುವದು ಸರಿಯಲ್ಲ.

ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೊರರು ಭಾರತಕ್ಕೆ ಬಂದಿದ್ದರು. ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ, ಎಲ್ಲಲ್ಲಿ ಬಾಂಬ್ ಬ್ಲಾಸ್ಟ್‌ಗಳಾಗಿ ಎಂಬುದನ್ನು ‌ತಿಳಿದು ಮಾತನಾಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ‌ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಗೃಹ ಮಂತ್ರಿಯಾಗಿ ಜೆ.ಪರಮೇಶ್ವರ ಕೆಲಸ ಮಾಡಿದ್ದಾರೆ. ನುಸುಳುಕೊರರು ಭಾರತಕ್ಕೆ ನುಗ್ಗುವದನ್ನ ಕಡಿವಾಣ ಹಾಕಿದ್ದೆ ಬಿಜೆಪಿ ಸರ್ಕಾರ. ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಬೆಂಗಳೂರು, ಹೈದ್ರಾಬಾದ್, ಮುಂಬೈ, ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆ ಬಾಂಬ್ ಬ್ಲಾಸ್ಟ್‌ಗಳಾಗಿವೆ. ಅದನ್ನೇಲ್ಲವನ್ನೂ ನೆನಪು ಮಾಡಿಕೊಳ್ಳಿ, ಬಾಂಬ್ ಬ್ಲಾಸ್ಟ್ ಆಗಲಿಕ್ಕೆ ಕಾರಣ ನುಸುಳುಕೊರರು. ಬಿಜೆಪಿ ಸರ್ಕಾರ ಬಂದ ಮೇಲೆ ಇವಕ್ಕೆಲ್ಲ ಕಡಿವಾಣ ಬಿದ್ದಿದೆ. ಈ ವಿಷಯದಲ್ಲಿ ನಾವು ರಾಜಕಾರಣ ಮಾಡಿಲ್ಲ. ಜಿ.ಪರಮೇಶ್ವರ್ ಅವರನ್ನ‌ ನಾವು ಸಜ್ಜನ, ದೇಶ ಮತ್ತು ರಾಜ್ಯದ ಬಗ್ಗೆ ಕಳಕಳಿ ಇರುವವರು ಎಂದು ತಿಳಿದುಕೊಂಡಿದ್ದೇವೆ‌. ರಾಹುಲ್ ಗಾಂಧಿಯಂತೆ‌ ಚಿಲ್ಲರೆಯಾಗಿ ಮಾತನಾಡುವುದನ್ನ ಬಿಡಬೇಕು ಎಂದರು.

Please follow and like us:

Leave a Reply

Your email address will not be published.

Back to top button
Close