News In KannadaNorth Karnataka

ಮೇಣದಬತ್ತಿ ಹಚ್ಚುವ ಮೂಲಕ ಮತದಾನ ಜಾಗೃತಿ

ಹುಬ್ಬಳ್ಳಿ, ಏ.26: ಇಂದು ತಾಲೂಕು ಆಡಳಿತಸೌಧದ ಮುಂಭಾಗದಲ್ಲಿ ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ಆಶ್ರಯದಲ್ಲಿ ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇಣದಬತ್ತಿ ಹಚ್ಚುವ ಮೂಲಕ ಮತದಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಇದೇ ಸಂದರ್ಭದಲ್ಲಿ ಮತದಾನದ ಕುರಿತಾದ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಲಾಯಿತು. ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ, ಎಂಆರ್ ಡಬ್ಲೂ ಮಹಾಂತೇಶ ಕುರ್ತಕೋಟಿ, ರಮೇಶ ಲಮಾಣಿ, ವಿವಿಧ ಗ್ರಾಮ ಪಂಚಾಯತಗಳ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಪಶು ಸಖಿಯರು, ಕೃಷಿ ಸಖಿಯರು, ಅಂಗನವಾಡಿ ಆಶಾ ಕಾರ್ಯಕರ್ತೆಯರು, ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಭಾಗವಹಿಸಿದ್ದರು.

Please follow and like us:

Leave a Reply

Your email address will not be published.

Back to top button
Close