News In KannadaNorth Karnataka
ಮೇ.16ರಂದು ವಧಾಲಯ, ಮಾಂಸದ ಅಂಗಡಿ ಬಂದ್
ಹುಬ್ಬಳ್ಳಿ ಮೇ.15: ಬುದ್ಧ ಪೂರ್ಣಿಮಾ ಪ್ರಯುಕ್ತ ಮೇ.16 ರಂದು ಹುಬ್ಬಳ್ಳಿ ಮತ್ತು ಧಾರವಾಡ ಅವಳಿನಗರದ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.
ಮಾಂಸದ ಅಂಗಡಿಗಳನ್ನು ತೆರೆದರೆ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.