NewsNews In Kannada

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಸಚಿವ ಸಂತೋಷ ಲಾಡ ಅನಿರೀಕ್ಷಿತ ಭೇಟಿ

ಧಾರವಾಡ, ಜು.12: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರು ಇಂದು ಸಂಜೆ ಧಾರವಾಡ ನಗರದ ಸೈದಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಕ್ ನಂತರದ ವಿದ್ಯಾರ್ಥಿನೀಯರ ವಸತಿ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿ, ವಿದ್ಯಾರ್ಥಿನೀಯರ ಊಟ, ಲೈಬ್ರರಿ, ಓದುವ ಕೊಠಡಿ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ಇಂದು ಸಂಜೆ 7 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರೊಂದಿಗೆ ವಿದ್ಯಾರ್ಥಿನೀಯರ ವಸತಿನಿಲಯಕ್ಕೆ ಆಗಮಿಸಿದ ಸಚಿವರು, ನೇರವಾಗಿ ಅಡುಗೆ ಕೊಣೆಗೆ ಭೇಟಿ ನೀಡಿ, ಆಹಾರ ತಯ್ಯಾರಿಕೆ, ಅಡುಗೆ ಪದಾರ್ಥ, ಸ್ವಚ್ಛತೆ, ನೈರ್ಮಲ್ಯ ಪರಿಶೀಲಿಸಿ, ಅಡುಗೆ ಪದಾರ್ಥಗಳ ಗುಣಮಟ್ಟ, ರುಚಿ ನೋಡಿದರು.

ನಂತರ ಊಟದ ಸಭಾಂಗಣದಲ್ಲಿ  ವಸತಿನಿಲಯದ ವಿದ್ಯಾರ್ಥಿನೀಯರೊಂದಿಗೆ ಸಂವಾದ ಮಾಡಿ, ಅವರ ಓದು, ಹಾಸ್ಟೆಲ್ ಸೌಲಭ್ಯ, ಇಲಾಖೆ ಅಧಿಕಾರಿಗಳು ತೋರುವ ಕಾಳಜಿ, ಆರೋಗ್ಯ ಸುರಕ್ಷತೆ ಬಗ್ಗೆ ಮಾಹಿತಿ ಪಡೆದರು.

ಸಚಿವರು ಮಾತನಾಡಿ, ಬೇಡಿಕೆ ಅನುಸಾರ ವಸತಿನಿಲಯದ ಆಸಕ್ತ ವಿದ್ಯಾರ್ಥಿನೀಯರಿಗೆ ಉಚಿತವಾಗಿ ಐಎಎಸ್, ಕೆಎಎಸ್ ದಂತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಾಗುವುದು. ನಿಲಯ ಪಾಲಕರಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಿದರು.

Please follow and like us:

Leave a Reply

Your email address will not be published.

Back to top button
Close